Breaking News
Home / ಜಿಲ್ಲೆ / ರಾಜ್ಯಕ್ಕೆ ಮುಂಬೈ, ದೆಹಲಿಯಿಂದ ಬಂದ ರೈಲುಗಳು……….

ರಾಜ್ಯಕ್ಕೆ ಮುಂಬೈ, ದೆಹಲಿಯಿಂದ ಬಂದ ರೈಲುಗಳು……….

Spread the love

ಬೆಂಗಳೂರು: ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಕರುನಾಡಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಆತಂಕ ಮನೆ ಮಾಡಿದೆ.

ಮುಂಬೈ ರೈಲಿನಲ್ಲಿ ಬಂದವರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು. ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್‍ನಿಂದ ವಿನಾಯ್ತಿ ಸಿಗಲಿದೆ. ಕ್ವಾರಂಟೈನ್ ಅವಧಿಯಲ್ಲಿ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕು.

ಮುಂಬೈನಿಂದ ಬಂದಿರೋ ಉದ್ಯಾನ್ ಎಕ್ಸ್‌ಪ್ರೆಸ್ ಸೋಮವಾರವೇ ರಾಜ್ಯ ಪ್ರವೇಶಿಸಿದ್ದು, ಯಾದಗಿರಿಯ ರೈಲ್ವೇ ನಿಲ್ದಾಣದಲ್ಲಿ 54 ಜನರು ಇಳಿದಿದ್ದಾರೆ. ಎಲ್ಲರನ್ನು ಸೈದಾಪುರ ರಾಣಿಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದೇ ರೈಲಿನಲ್ಲಿ ಯಾದಗಿರಿಯಿಂದ ಬೆಂಗಳೂರಿಗೆ 25 ಜನರು ಪ್ರಯಾಣಿಸಿದ್ದಾರೆ.

ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಿಂದ ಕಲಬುರಗಿಯಲ್ಲಿ 119 ಜನ ಆಗಮಿಸಿದ್ದು, ಇದರಲ್ಲಿ 98 ಜನ ಕಲಬುರಗಿ, 20 ಜನ ವಾಡಿ, ಒಬ್ಬರು ಶಹಾಬಾದ್ ಮೂಲದವರಾಗಿದ್ದಾರೆ. ಎಲ್ಲ 119 ಜನರನ್ನು ಕಲಬುರಗಿಯ ವಿವಿಧ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ರಾಯಚೂರಿಗೆ ರಾಯಲ್ ಸೀಮಾ ಎಕ್ಸ್‌ಪ್ರೆಸ್ ಮತ್ತು ಉದ್ಯಾನ್ ಎಕ್ಸ್‌ಪ್ರೆಸ್ ನಿಂದ ಒಟ್ಟು 110 ಜನ ಬಂದಿದ್ದಾರೆ. ಉದ್ಯಾನ್ ಎಕ್ಸ್‍ಪ್ರೆಸ್‍ನಿಂದ ಬಂದವರನ್ನು ಏಳು ದಿನದ ಸಾಂಸ್ಥಿಕ ಕ್ವಾರಂಟೈನ್ ಗೆ ಶಿಫ್ಟ್ ಮಾಡಲಾಗಿದೆ. ರಾಯಲ್ ಸೀಮಾ ಎಕ್ಸ್‌ಪ್ರೆಸ್ ಪ್ರಯಾಣಿಕರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ