Breaking News

ಲೋಕಸಭೆ ಚುನಾವಣೆಯಲ್ಲಿ ಕಮಲ ಹಾಸನ ಸ್ಪರ್ಧೆ

Spread the love

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಕಮಲ್ ಹಾಸನ್ (Kamal Haasan) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು (Coimbatore) ಅಥವಾ ಚೆನ್ನೈನಿಂದ (Chennai) ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಅಧ್ಯಕ್ಷರೂ ಆಗಿರುವ ಕಮಲ್‌ ಹಾಸನ್‌ ಅವರು, ಈಗಾಗಲೇ ಆಡಳಿತಾರೂಢ ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.

ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾರೆ.

ಕೊಯಮತ್ತೂರು ಕ್ಷೇತ್ರದಿಂದ ಪ್ರಸ್ತುತ ಡಿಎಂಕೆ ಮೈತ್ರಿ ಪಕ್ಷವಾಗಿರುವ ಸಿಪಿಐ-ಎಂ ಪ್ರತಿನಿಧಿಸುತ್ತಿದ್ದರೆ, ಚೆನ್ನೈ ಉತ್ತರದಲ್ಲಿ ಡಾ ಕಲಾನಿಧಿ ವೀರಸ್ವಾಮಿ, ದಕ್ಷಿಣದಲ್ಲಿ ಡಾ ತಮಿಳಚಿ ತಂಗಪಾಂಡಿಯನ್ ಮತ್ತು ಚೆನ್ನೈನ ಕೇಂದ್ರದಲ್ಲಿ ದಯಾನಿಧಿ ಮಾರನ್ ಪ್ರತಿನಿಧಿಸಿದ್ದಾರೆ. ಮೂವರೂ ಡಿಎಂಕೆ ಪಕ್ಷದವರಾಗಿದ್ದಾರೆ.

ಹೀಗಾಗಿ ಕೊಯಮತ್ತೂರಿನಿಂದ ಸ್ಪರ್ಧಿಸಲು ಡಿಎಂಕೆ ಪಕ್ಷವು ತನ್ನ ಮೈತ್ರಿಯೊಂದಿಗೆ ಚರ್ಚಿಸಬೇಕಾಗುತ್ತದೆ. ಮೂಲಗಳ ಪ್ರಕಾರ ಕಮಲ್ ಹಾಸನ್ ಅವರ ಮೊದಲ ಆಯ್ಕೆ ಕೊಯಮತ್ತೂರು ಆಗಿದ್ದು, ಲೋಕಸಭೆ ಚುನಾವಣೆಯಲ್ಲಿ ಚೆನ್ನೈ ಉತ್ತರ, ದಕ್ಷಿಣ ಅಥವಾ ಮಧ್ಯ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎನ್ನಲಾಗಿದೆ


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ