Breaking News

ಇಸ್ಲಾಂ ಇರುವವರೆಗೂ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ

Spread the love

ತ್ತರ ಕನ್ನಡ : ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಾರೆ. ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತದೊ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.

 

ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿಯಲ್ಲಿ (Banavasi) ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕಾಗಿದೆ ಎಂದರು.

ಬಿಜೆಪಿ, ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಇರಲಿದೆ. ನಾವಿಲ್ಲದಿದ್ದರೆ ಜಗತ್ತಿಗೆ ನೆಮ್ಮದಿ ಇಲ್ಲ, ಹಿಂದುತ್ವವೇ ದೇಶದ ಉಸಿರು ಎಂದ ಅನಂತಕುಮಾರ್ ಹೆಗಡೆ, ಬಿಜೆಪಿ ಉತ್ಸಾಹ ನೋಡಿ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್​ನವರು ಶಸ್ತ್ರ ತ್ಯಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವೈಚಾರಿಕವಾಗಿ ಗೆದ್ದು ತೋರಿಸಬೇಕಿದೆ ಎಂದರು.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ