Breaking News

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

Spread the love

ಬೆಂಗಳೂರು: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ‌ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು ರಣತಂತ್ರವನ್ನು ಚರ್ಚಿಸಲಾಗುತ್ತಿದೆ. ಅದೇನೆಂದರೆ, ಇಲ್ಲಿ ಖ್ಯಾತ ಚಿತ್ರ ನಟ ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ನಟ ರಾಕ್ಷಸ ಡಾಲಿ ಧನಂಜಯ ಅವರನ್ನು ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿದೆ ಎಂದು ತಿಳಿದುಬಂದಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ