Breaking News

ತಿಷ್ಠಿತ ಹೋಟೆಲ್​​ಗಳಲ್ಲಿ ಹಣ ಕದಿಯುತ್ತಿದ್ದ ಆರೋಪಿ ಬಂಧನ

Spread the love

ಬೆಂಗಳೂರು, ಫೆ.19: ಪ್ರತಿಷ್ಠಿತ ಹೋಟೆಲ್​​ಗಳಲ್ಲಿ (Hotels) ಹಣ ಕದಿಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಎಂ.ಎಸ್.ರವಿಕುಮಾರ್ ಬಂಧಿತ ಆರೋಪಿ. ಈತ ಪ್ರತಿಷ್ಠಿತ ಹೋಟೆಲ್​ಗಳನ್ನೇ ಟಾರ್ಗೆಟ್ ಮಾಡಿ ಹಣ ಎಗರಿಸ್ತಿದ್ದ. ಮೊದಲಿಗೆ ತನಗೆ ವಯಸ್ಸಾಗಿದೆ, ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್​ನಲ್ಲಿ ಕೆಲಸ ಪಡೆಯುತ್ತಿದ್ದ. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ ಹೊಂಚುಹಾಕಿ ಹಣ ಎಗರಿಸ್ತಿದ್ದ.

ಆರೋಪಿ ರವಿಕುಮಾರ್, ಕಳೆದ ವರ್ಷ ಫೆ.19ರಂದು ಕೆ.ಆರ್.ಪುರದ ಭಟ್ಟರಹಳ್ಳಿಯ ಹೋಟೆಲ್​​​​​​ನಲ್ಲಿ ಹಣ ಕಳವು ಮಾಡಿದ್ದ. ಹೋಟೆಲ್​​​​​​​​ನ ಕ್ಯಾಷ್​​​ಕೌಂಟರ್​​​​ನಲ್ಲಿದ್ದ 1 ಲಕ್ಷ ಹಣ ಕದ್ದಿದ್ದ. ಸತೀಶ್​ ಶೆಟ್ಟಿ ಎಂಬುವರ ಹೋಟೆಲ್​​ನಲ್ಲಿ ಹಣ ಕದ್ದು ಪರಾರಿಯಾಗಿದ್ದ. ಇದಾದ ಬಳಿಕ ಇತ್ತೀಚೆಗೆ ದೇವನಹಳ್ಳಿ ಬಳಿ ಹೋಟೆಲ್​ನಲ್ಲಿ ಕೆಲಸ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ​​ಹಣ ಕಳೆದುಕೊಂಡಿದ್ದ ಮಾಲೀಕ ಸತೀಶ್ ಶೆಟ್ಟಿಯಿಂದಲೇ ಆರೋಪಿ ಲಾಕ್ ಆಗಿದ್ದಾನೆ. ಸತೀಶ್ ಶೆಟ್ಟಿ ಅವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಪ್ರತಿಷ್ಠಿತ ಹೋಟೆಲ್​​ ಗುರಿಯಾಗಿಸಿಕೊಂಡು ಹಣ ಎಗರಿಸುತ್ತಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ.

 

ಇನ್ನು ಆರೋಪಿ ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕ್ಯಾಷ್ ಕೌಂಟರ್​ನಲ್ಲಿ ಕುಳಿತೇ ಹಣವನ್ನು ಪ್ಯಾಂಟ್ ಜೇಬಿಗಿಳಿಸಿ ಅಲ್ಲಿಂದ ಕಾಲ್ಕಿತ್ತ ಆರೋಪಿಯ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ