Breaking News

ಮತ್ತೆ ಶುರುವಾಯ್ತು ರೈತರ ದೆಹಲಿ ಚಲೋ ಯಾತ್ರೆ- ಪಂಜಾಬ್‌ ಗಡಿಯಲ್ಲಿ 14 ಸಾವಿರ ಮಂದಿ ಜಮಾವಣೆ!

Spread the love

ವದೆಹಲಿ : ಕೇಂದ್ರ ಬಿಜೆಪಿ (BJP) ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ (Farmers protest) ಬುಧವಾರದಿಂದ ತೀವ್ರಸ್ವರೂಪ ಪಡೆಯುವ ಸಾಧ್ಯತೆಯಿದೆ. ಪಂಜಾಬ್‌ – ಹರಿಯಾಣಾ ಗಡಿಯಲ್ಲಿ (Punjab-Haryana border) 14,000 ಕ್ಕೂ ಹೆಚ್ಚು ಮಂದಿ ರೈತರು ಇಂದು ಒಗ್ಗೂಡುತ್ತಿದ್ದಾರೆ.

ಜೊತೆಗೆ 1200 ಟ್ರಾಕ್ಟರ್ ಟ್ರಾಲಿಗಳು, 300 ಕಾರ್‌ ಗಳು ಹಾಗೂ 10 ಮಿನಿ ಬಸ್‌ ಗಳೂ ಸಹ ಇಂದು ದೆಹಲಿ ಚಲೋ(Delhi Chalo) ಯಾತ್ರೆಗೆ ಸಜ್ಜಾಗಿವೆ.

Delhi Chalo : ಮತ್ತೆ ಶುರುವಾಯ್ತು ರೈತರ ದೆಹಲಿ ಚಲೋ ಯಾತ್ರೆ- ಪಂಜಾಬ್‌ ಗಡಿಯಲ್ಲಿ 14 ಸಾವಿರ ಮಂದಿ ಜಮಾವಣೆ!

ಪ್ರತಿಯೊಂದು ಬೆಳೆಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕೆನ್ನುವುದು ರೈತರ ಪ್ರಮುಖ ಬೇಡಿಕೆಯಾಗಿದೆ.

ಇದೇ ವೇಳೆ, ಹರ್ಯಾಣಾ ಸರ್ಕಾರವು ಇಂಟರ್ನೆಟ್‌ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ. ಜೊತೆಗೆ ಸಮೂಹ ಸಂದೇಶ ಪ್ರಸಾರಕ್ಕೂ (Bulk SMS) ಕಡಿವಾಣ ಹಾಕಿದೆ. ಅಂಬಾಲಾ, ಕುರುಕ್ಷೇತ್ರ, ಕೈಥಾಲ್‌, ಜಿಂದ್‌, ಹಿಸಾರ್‌, ಫತೇಹಾಬಾದ್‌, ಸಿರಸಾ ಜಿಲ್ಲೆಗಳಲ್ಲಿ ಈ ನಿರ್ಬಂಧ ಜಾರಿಯಾಗಿದೆ.

ದೆಹಲಿ ಚಲೋ ಯಾತ್ರೆಯ ಸಮಯದಲ್ಲಿ ಯಾವುದೇ ಅನಾಹುತ, ದೊಂಬಿ-ಗಲಭೆಗಳು ಸಂಭವಿಸಿದಂತೆ ಸೂಕ್ತ ಪೊಲೀಸ್‌ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ