Breaking News

ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ದ ದೂರು

Spread the love

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ತಗಡೇ ಹಾಗೂ ಗುಮ್ಮಿಸ್ಕೊತ್ತೀಯಾ ಪದ ಬಳಕೆಗೆ ದೂರು ದಾಖಲಾದ ಬೆನ್ನಲ್ಲೇ ಗೌಡತಿಯರ ಸೇನೆಯಿಂದ ನಟ ವಿರುದ್ದ ದೂರು ಸಲ್ಲಿಸಲಾಗಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರೆ ಈಗ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

  ಜಯಶ್ರೀ , ರೇಣುಕಾ ನೇತೃತ್ವದಲ್ಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಮಹಿಳೆಯರು ನಟ ಮಹಿಳೆಯರ ಕುರಿತು ಮಾಡಿದ ಕಮೆಂಟ್ ಖಂಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರ್ಶನ್ 25 ನೇ ಪರ್ವದಲ್ಲಿ ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆ ಈಗ ವಿವಾದಕ್ಕೆ ದಾರಿ ಮಾಡಿದೆ.


ಒಬ್ಬಳು ಇವತ್ತು ಬರ್ತಾಳೆ , ನಾಳೆ ಅವಳು ಹೋಗ್ತಾಳೆ .ಅವರ ಅಜ್ಜಿನ. ಬಡಿಯಾ ಪದ ಬಳಕೆ ಈಗ ವಿವಾದಕ್ಕೆ ಕಾರಣವಾಗಿದೆ. ಸಾರ್ವಜನಿಕವಾಗಿ ಮಹಿಳೆಯರಿಗೆ ಅವಮಾನ ಮಾಡಿದ್ದಾಗಿ ಮಹಿಳೆಯರು ಆರೋಪಿಸಿದ್ದಾರೆ. ಜವಾಬ್ದಾರಿಯುತ ನಟ ಈತರ ಪದ ಬಳಸೋದು ಎಷ್ಟು ಸರಿ ಎಂದು ಮಹಿಳೆಯರು ಪ್ರಶ್ನಿಸಿದ್ದಾರೆ.


ಈ ದೂರು ಮಾತ್ರವಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಇನ್ನೊಂದು ದೂರು ಬಂದಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ. ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ಕೂಡಾ ವ್ಯಕ್ತವಾಗಿದೆ. ದರ್ಶನ್ ಪದ ಬಳಕೆಗೆ ಕರ್ನಾಟಕ‌ಪ್ರಜಾಪರ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ