Breaking News

ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು: ಸರ್ಕಾರ

Spread the love

ಬೆಂಗಳೂರು: ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು ಮಾಡಲಾಗಿದೆ. ₹1,726 ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು.

ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿವೆ.

ಕೇಂದ್ರ ಸರ್ಕಾರ ಕಾಮಗಾರಿಗಳ ಅನುಷ್ಠಾನಕ್ಕೆ ಜೂನ್‌-2024ರವರೆಗೆ ಅವಕಾಶ ನೀಡಿದೆ. ಎಲ್ಲ ಕಾಮಗಾರಿಗಳನ್ನೂ ನಾಲ್ಕು ತಿಂಗಳ ಒಳಗೆ ಅನುಷ್ಠಾನಗೊಳಿಸಲಾಗುವುದು ಎಂದರು.

ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು: ಸರ್ಕಾರ

ಬರಗಾಲದಿಂದ ರಾಜ್ಯದಲ್ಲಿ 5.11 ಲಕ್ಷ ಎಕರೆ ತೋಟಗಾರಿಕಾ ಬೆಳೆ ಹಾನಿಯಾಗಿದೆ. 30.24 ಲಕ್ಷ ರೈತರಿಗೆ ₹573.28 ಕೋಟಿ ಪರಿಹಾರ ನೀಡಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಹೇಳಿದರು.

ಜೆಡಿಎಸ್‌ನ ಟಿ.ಎ. ಶರವಣ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನೆರವು ದೊರೆತ ನಂತರ ಮುಂದಿನ ಪರಿಹಾರ ವಿತರಿಸಲಾಗುವುದು ಎಂದರು.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಬೈ-ಲಾಗಳಿಗೆ ತಿದ್ದುಪಡಿ ತರುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಮಲ್ಲಿಕಾರ್ಜುನ್‌ ಹೇಳಿದರು.

ಗಣಿಗಾರಿಕೆಯಿಂದ ಬಾಧಿತವಾದ ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳ 466 ಗ್ರಾಮಗಳ ಅಭಿವೃದ್ಧಿಗೆ ₹7,634 ಕೋಟಿ ಮೊತ್ತಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ. ಹೊಸ ಹಳ್ಳಿಗಳ ಸೇರ್ಪಡೆ ಅಥವಾ ಹಣವನ್ನು ಇತರೆ ಭಾಗಕ್ಕೆ ಹಂಚಿಕೆ ಮಾಡಲು ಅವಕಾಶ ಇಲ್ಲ ಎಂದರು.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ