Breaking News

ದಲಿತ ಯೋಜನೆಗಳ‌ ಮಾಲೀಕ ನೀನಲ್ಲ: ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Spread the love

ಹಾವೇರಿ: ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ‌ ಮಾಲೀಕ ನೀನಲ್ಲ ಎಂಬ ಫಲಕವನ್ನು ಹಿಡಿದು ಬಿಜೆಪಿ ಕಾರ್ಯಕರ್ತರು (BJP Protest) ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ (Government Of Karnataka) ವಿರುದ್ಧ ಧಿಕ್ಕಾರ ಕೂಗಿದರು.

BJP PROTEST: ದಲಿತ ಯೋಜನೆಗಳ‌ ಮಾಲೀಕ ನೀನಲ್ಲ: ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಪೂಜಾರ್ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ರಾಜ್ಯ ಸರ್ಕಾರವು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ‌ ಮಾಲೀಕ ನೀನಲ್ಲಾ, ದಲಿತ ಸಮುದಾಯ (Dalit Community) ತುಳಿಯುತ್ತಿರುವ ಸರ್ಕಾರಕ್ಕೆ‌ ಧಿಕ್ಕಾರ ಧಿಕ್ಕಾರ ಎಂಬ ಘೋಷಣಾ ಫಲಕಗಳನ್ನ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ