Breaking News

ವಿಧಾನಪರಿಷತ್’ನಲ್ಲಿ ‘ರಾಜ್ಯ ಸರ್ಕಾರ’ಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ ವಿಧೇಯಕ’ ತಿರಸ್ಕೃತ

Spread the love

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ.

ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು.

ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು.

BREAKING: 'ವಿಧಾನಪರಿಷತ್'ನಲ್ಲಿ 'ರಾಜ್ಯ ಸರ್ಕಾರ'ಕ್ಕೆ ಮುಖಭಂಗ: 'ಹಿಂದೂ ಧಾರ್ಮಿಕ ವಿಧೇಯಕ' ತಿರಸ್ಕೃತ

ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು. ಹೀಗಾಗಿ ವಿಧೇಯಕದ ವಿರೋಧವಾಗಿ ಹೆಚ್ಚು ಮತ ಚಲಾವಣೆಯಾದ ಕಾರಣ, ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ತಿರಸ್ಕೃತಗೊಂಡಿದೆ.

ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಳ್ಳುತ್ತಿದ್ದಂತೇ ಬಿಜೆಪಿ ಸದಸ್ಯರಿಂದ ಜೈ ಶ್ರೀರಾಮ ಎಂಬುದಾಗಿ ಘೋಷಣೆ ಕೂಗಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದ ಭಾರತ್ ಮಾತಾಕಿ ಜೈ, ಜೈ ಭೀಮ್ ಎಂಬುದಾಗಿ ಘೋಷಣೆ ಕೂಗಲಾಯಿತು.

ಒಟ್ಟಾರೆಯಾಗಿ ರಾಜ್ಯ ಸರ್ಕಾರಕ್ಕೆ ಇಂದು ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ವಿಧೇಯಕ ತಿರಸ್ಕೃತಗೊಳ್ಳುವ ಮೂಲಕ ಭಾರೀ ಮುಜುಗರವೇ ಉಂಟಾಗಿದೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ