Breaking News

ಲೋಕಸಭೆ ಚುನಾವಣೆ: ಪರಿಶಿಷ್ಟರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

Spread the love

ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಈ ಬಾರಿ ಎಸ್‍ಸಿ/ಎಸ್‍ಟಿ ಸಮುದಾಯದ ಅನಂತಕುಮಾರ ಬ್ಯಾಕೋಡ ಅವರಿಗೆ ನೀಡಬೇಕು ಎಂದು ಪಕ್ಷದ ಎಸ್‍ಸಿ/ಎಸ್‍ಟಿ ಘಟಕದ ಉಪಾಧ್ಯಕ್ಷೆ ಲಕ್ಷ್ಮೀ ನಾಗಣ್ಣವರ ವರಿಷ್ಠರನ್ನು ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪರಿಶಿಷ್ಟ ಜಾತಿಯವರಿಗೆ 50 ವರ್ಷಗಳಿಂದಲೂ ಟಿಕೆಟ್‌ ನೀಡಿಲ್ಲ.

ಲೋಕಸಭೆ ಚುನಾವಣೆ: ಪರಿಶಿಷ್ಟರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

ಸುಮಾರು 6 ಲಕ್ಷ ಮತಗಳಿದ್ದರೂ ಈ ಜನಾಂಗಕ್ಕೆ ವಿಧಾನ ಪರಿಷತ್, ವಿಧಾನಸಭೆ ಮತ್ತು ನಿಗಮ ಮಂಡಳಿಗೂ ಪರಿಗಣಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಒಂದು ವೇಳೆ ಪರಿಶಿಷ್ಷರಿಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ಚುನಾವಣೆಯಲ್ಲಿ ನಮ್ಮ ನಿರ್ಧಾರ ಏನು ಎಂಬುದನ್ನು ಚರ್ಚೆ ಮಾಡಿ ನಿರ್ಧರಿಸಬೇಕಾಗುತ್ತದೆ’ ಎಂದರು.

ಎಸ್‍ಸಿ/ಎಸ್‍ಟಿ ಕಾಂಗ್ರೆಸ್ ಜಿಲ್ಲಾ ಮೋರ್ಚಾ ಉಪಾಧ್ಯಕ್ಷ ರಮೇಶ ರಜಪೂತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಮದರಂಗಿ, ಸಾಗರ ಮುನವಳ್ಳಿ, ದಲಿತ ಮುಖಂಡ ಬಿ.ಆರ್. ದೊಡಮನಿ, ಧರ್ಮಪ್ಪ ಮಾದರ ಇದ್ದರು.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ