Breaking News

ಸಿದ್ದರಾಮಯ್ಯ ಬಗ್ಗೆ ಅನಂತ್​ಕುಮಾರ್​ ಹೆಗಡೆ ವ್ಯಂಗ್ಯ; ಸಚಿವ ಎಚ್​.ಕೆ. ಪಾಟೀಲ್​ ತಿರುಗೇಟು!

Spread the love

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಪಗಾರ ಕೊಡಲು ಹಣವಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಮಾಡಿದ ಟೀಕಾಪ್ರಹಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೇ ಇದ್ದಾರೆ? ಹೇಳಿ ನೋಡೋಣ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಬಗ್ಗೆ ಅನಂತ್​ಕುಮಾರ್​ ಹೆಗಡೆ ವ್ಯಂಗ್ಯ; ಸಚಿವ ಎಚ್​.ಕೆ. ಪಾಟೀಲ್​ ತಿರುಗೇಟು!

 

ಬಾಗಲಕೋಟೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೆ ಇದ್ದಾರೆ ಹೇಳಿ? ನಾನು ಮಂತ್ರಿ ಇದ್ದೇನೆ, ಇಲ್ಲೇ ಶಾಸಕರು ಸಹ ಇದ್ದಾರೆ. ನಮ್ಮ ಮಾಜಿ ಶಾಸಕರು ಪಿಂಚಣಿ ಪಡೆಯುತ್ತಿದ್ದಾರೆ. ಕೇಳ್ರಿ ಇವರ ಸಂಬಳ ಸ್ಟಾಪ್ ಆಗಿದೆಯಾ ಅಂತ. ಎರಡು ಸಾವಿರ ರೂ. ಏನು ನಮ್ಮ ಜನರಿಗೆ ಒಂದನೇ ತಾರೀಖಿಗೆ ಹಣ ತಲುಪುತ್ತಿದೆ ಅಲ್ವಾ, ಅದನ್ನು ಸಹಿಸೋದಕ್ಕೆ ಆಗ್ತಿಲ್ಲ ಇವರಿಗೆ ಅಷ್ಟೇ ಎಂದರು.

 

ಸಿದ್ದರಾಮಯ್ಯ ಅವರಿಗೆ ಸಿದ್ದರಾಮುಲ್ಲಾಖಾನ್ ಎಂದು ವ್ಯಂಗ್ಯವಾಡಿದ ಅನಂತಕುಮಾರ ಹೆಗಡೆ ವಿಚಾರಕ್ಕೆ ಸ್ಪಂದಿಸಿದ ಸಚಿವರುಮ, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅತ್ಯಂತ ದುರ್ದೈವ, ಸಾರ್ವಜನಿಕ ಬದುಕಿನಲ್ಲಿ ಇರುವವರು ಇಂತಹ ಭಾಷೆ ಬಳಸಬಾರದು. ಸಮಾಜವನ್ನು ಸುಧಾರಣೆ ಕಡೆ ಒಯ್ಯಬೇಕೇ ಹೊರತು, ಅಲ್ಲಿ ಸಮಾಧಾನವನ್ನು ಕೆದಕಿ ಅಗೌರವದ ವಾತಾವರಣ ಸೃಷ್ಟಿ ಮಾಡಿದರೆ ಅದು ನಿಮ್ಮ ಮೈಮೇಲೆ ಬರುತ್ತದೆ ಎಂಬ ಎಚ್ಚರಿಕೆ ಇರಲಿ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ₹4.85 ಕೋಟಿ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

Spread the loveಬೆಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ