Breaking News

ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ, ಹೆಗಲ ಮೇಲೆ ಹೊತ್ತು ಓಡಿ ಪ್ರಾಣ ಉಳಿಸಿದ ಕಾನ್ಸ್ಟೇಬಲ್

Spread the love

ನೆಯಲ್ಲಿ ನಡೆದ ಸಣ್ಣ ಜಗಳದಿಂದ ಯುವಕನೊಬ್ಬ ಖಿನ್ನತೆಗೆ ಒಳಗಾಗಿ ಕೀಟನಾಶಕ ಕುಡಿದು ಪ್ರಜ್ಞೆ ತಪ್ಪಿ ಬಿದ್ದಿದ್ದ. ಆತನನ್ನು ಗಮನಿಸಿದ ಪೊಲೀಸ್ ಪೇದೆಯೊಬ್ಬರು ಆತನನ್ನು ಹೆಗಲ ಮೇಲೆ ಎತ್ತಿಕೊಂಡು ಎರಡು ಕಿಲೋಮೀಟರ್ ಓಡಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.
ಪೊಲೀಸ್ ಪೇದೆ ಹಾಘೂ ಗೃಹರಕ್ಷಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಸಣ್ಣದೊಂದು ವಿಚಾರಕ್ಕೆ ಮನೆಯಲ್ಲಿ ನಡೆದ ಜಗಳದಿಂದ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ (Young Man) ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಸಮಯ ಪ್ರಜ್ಞೆ ಮೆರೆದ ಪೊಲೀಸ್ ಕಾನ್ಸ್ಟೇಬಲ್ (Police Constable) ಯುವಕನ ಜೀವ ಉಳಿಸಿದ್ದಾರೆ. ಕೀಟನಾಶಕ ಸೇವಿಸಿ ಗದ್ದೆಯಲ್ಲಿ ಬಿದ್ದಿದ್ದ ಯುವಕನನ್ನು ತನ್ನ ಹೆಗಲ ಮೇಲೆ ಹಾಕಿಕೊಂಡು ಓಡೋಡಿ ಬಂದು ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ, ಹೆಗಲ ಮೇಲೆ ಹೊತ್ತು ಓಡಿ ಪ್ರಾಣ ಉಳಿಸಿದ ಕಾನ್ಸ್ಟೇಬಲ್

ತೆಲಂಗಾಣದ ಕರೀಂನಗರ ಜಿಲ್ಲೆಯ ವೀಣವಂಕ ಮಂಡಲದಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಬೇಟಿಗಲ್ ಗ್ರಾಮದ ಸುರೇಶ್ ಎಂಬಾತ ಮನೆಯಲ್ಲಿ ಜಗಳ ಮಾಡಿಕೊಂಡು ಜಮೀನಿಗೆ ಬಂದು ಕೀಟನಾಶಕ ಕುಡಿದಿದ್ದ. ಜಮೀನಿನಲ್ಲಿ ಕೆಲಸ ಮಾಡುವವರು ಇದನ್ನು ಗಮನಿಸಿ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಮಾಹಿತಿ ಸಿಕ್ಕ ಹತ್ತೇ ನಿಮಿಷಕ್ಕೆ ಪೊಲೀಸ್ ಪೇದೆ ಜೈಪಾಲ್ ಮತ್ತು ಗೃಹರಕ್ಷಕ ದಳದ ಕಿನ್ನೇರ ಸಂಪತ್ ಸ್ಥಳಕ್ಕೆ ಬಂದರು. ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ಕಂಡ ಪೊಲೀಸ್ ಕಾನ್ಸ್ಟೇಬಲ್ ಜೈಪಾಲ್, ಸುರೇಶ್‌ನನ್ನು ತಮ್ಮ ಭುಜದ ಮೇಲೆ ಎತ್ತಿಕೊಂಡು ಹೊಲದ ಗದ್ದೆಗಳ ನಡುವೆ ಸುಮಾರು ಎರಡು ಕಿಲೋಮೀಟರ್ ವರೆಗೆ ಓಡಿ ಗ್ರಾಮಕ್ಕೆ ಕರೆತಂದರು.

ಬಳಿಕ ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿ ಆಟೋದಲ್ಲಿ ಜಮ್ಮಿಕುಂಟಾ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾದರು. ಆದರೆ ಸುರೇಶನನ್ನು ಪರೀಕ್ಷಿಸಿದ ವೈದ್ಯರು ಆತನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವಾರಂಗಲ್ ಎಂಜಿಎಂಗೆ ಸ್ಥಳಾಂತರಿಸಿದರು. ವೀಣವಂಕ ಎಸ್​ಐ ವಂಶಿಕೃಷ್ಣ ಅವರೊಂದಿಗೆ ಸಾಕಷ್ಟು ಪ್ರಯತ್ನದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುರೇಶ್ ಅವರ ಜೀವ ಉಳಿಸಿದ ಕಾನ್ ಸ್ಟೆಬಲ್ ಜೈಪಾಲ್ ಹಾಗೂ ಗೃಹರಕ್ಷಕ ದಳದ ಸಂಪತ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ. ಪೊಲೀಸ್ ಪೇದೆ ಯುವಕನನ್ನು ರಕ್ಷಿಸುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ