Breaking News

ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು

Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya sabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ವಿಜಯೋತ್ಸವದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್‌ಎಸ್‌ಎಲ್‌ ವರದಿಯ (FSL Report) ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

 

ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಈ ವರದಿಯು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಮಾಡಿದ್ದನ್ನು ಸಮರ್ಥಿಸುತ್ತಿದೆ ಎಂದು ಬಿಜೆಪಿ ಟ್ವೀಟ್‌ನಲ್ಲಿ ಹೇಳಿದೆ.

ಖಾಸಗಿ ವಿಧಿ ವಿಜ್ಞಾನ ತಜ್ಞರಾದ ಫಣೀಂದ್ರ ಬಿ.ಎನ್‌ ಅವರು ನೀಡಿರುವ ಎಫ್‌ಎಸ್‌ಎಲ್‌ ವರದಿಯನ್ನು ಟ್ವೀಟ್‌ ಮಾಡಿರುವ ಬಿಜೆಪಿ, ಇದರಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದನ್ನು ದೃಢಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದೆ. ಇದನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಮಲಪಕ್ಷ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಜಿ. ಪರಮೇಶ್ವರ್‌

ರಾಜ್ಯ ಸರಕಾರ ವಿವಾದಿತ ವಿಡಿಯೊದ ಎಫ್‌ಎಸ್‌ಎಲ್‌ ವಿಶ್ಲೇಷಣೆಗೆ ಕಳುಹಿಸಿಕೊಟ್ಟಿದ್ದು, ಅದರ ವರದಿ ಇನ್‌ಎನೂ ಬಂದಿಲ್ಲ. ಈಗ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವರದಿ ಅಧಿಕೃತವಲ್ಲ ಎಂದು ಸೋಮವಾರ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ʻʻನಾವು ಖಾಸಗಿ ಸಂಸ್ಥೆ ವರದಿ ಗಣನೆಗೆ ತೆಗೆದುಕೊಳ್ಳಲ್ಲ. ಸರ್ಕಾರದ ಎಫ್‌ಎಸ್‌ಎಲ್‌, ಗೃಹ ಇಲಾಖೆಯ ಫಾರೆನ್ಸಿಕ್ ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾಸಿಟಿವ್ ಆಗಿ, ಕೂಗಿರೋದು ದೃಢ ಅಂದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆʼʼ ಎಂದು ಜಿ. ಪರಮೇಶ್ವರ್‌ ಹೇಳಿದ್ದಾರೆ.

ಸರ್ಕಾರ ವರದಿಯನ್ನು ಮುಚ್ಚಿಡುತ್ತಿದೆ ಎನ್ನುವ ಬಿಜೆಪಿ ಆರೋಪ, ಘಟನೆಯ ಮರುದಿನವೇ ಪ್ರಿಯಾಂಕ್ ಖರ್ಗೆ ವರದಿ ಬಂದಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇದು ನಮ್ಮ‌ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳ್ತೀನಿ ಎಂದು ಹೇಳಿದರು.

ಎಫ್‌ಎಸ್‌ಎಲ್‌ ವರದಿ ಬಿಡುಗಡೆ ಮಾಡಲು ಖಾಸಗಿಯವರು ಯಾರು? ಅವರಿಗೆ NOC ಯಾರು ಕೊಟ್ಟಿದ್ದಾರೆ. ಅವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ.? ಎಲ್ಲವನ್ನೂ ಚೆಕ್ ಮಾಡ್ತೀನಿ ಎಂದು ಹೇಳಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ