Breaking News

ಕರ್ನಾಟಕದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು

Spread the love

ನವದೆಹಲಿ ಮಾರ್ಚ್​ 07: ಪಣಜಿ-ಹೈದರಾಬಾದ್ (Panaji-Hydarabad)​ EC10 ಕಾರಿಡಾರ್​​ ಅಡಿಯಲ್ಲಿ ಬಾಗಲಕೋಟೆ (Bagalkote) ಮತ್ತು ಬೆಳಗಾವಿ (Belagavi) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ 92.40 ಕಿಮೀ ಉದ್ದದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2,675 ಕೋಟಿ ರೂ. ಮಂಜೂರು ಮಾಡಿದೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಯಲ್ಲಿ ಹೆದ್ದಾರಿ ಉನ್ನತೀಕರಿಸಲಾಗುತ್ತದೆ.

ಈ ಯೋಜನೆಯು ಪಣಜಿ-ಹೈದರಾಬಾದ್​ ಆರ್ಥಿಕ ಕಾರಿಡಾರ್​ನ ಅವಿಭಾಜ್ಯ ಅಂಗವಾಗಿದೆ. EC10 ಯೋಜನೆಯು ಪಣಜಿ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಈ EC10 ಮೀನುಗಾರಿಗೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧ್ಯಾನಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್​ ಮತ್ತು ಹೆಲ್ತಕೇರ್​ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್​ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಳನ್ನು ಸಂಪರ್ಕಿಸುತ್ತದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ