Breaking News

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ

Spread the love

ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. ಹೀಗಾಗಿ ವಾಲ್ಮೀಕಿ ಸಮಾಜದ ನಾಯಕರು ಶೆಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದರು.

ಸಮಾಜದ ಯಾವುದೇ ಸಭೆ ಸಮಾರಂಭಗಳಿಗೆ ನಮಗೆ ಆಹ್ವಾನವಿಲ್ಲ. ಸಮಾಜದ ಬೇರೆ ಕುಟುಂಬದವರ ಕಾರ್ಯಕ್ರಮಕ್ಕೆ ಕೂಡಾ ಆಹ್ವಾನ ಇಲ್ಲ. ದಂಡ ಪಾವತಿ ಮಾಡುವ ವರಗೆ ಸಮಾಜದ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರು ಎಂದು ಸಮಾಜದ ಮುಖಂಡರಿಂದ ಆದೇಶವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ