Breaking News

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ

Spread the love

ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.

ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ.

ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್​ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದೆ. ಈ ಕಾರಣದಿಂದ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಿಸಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ