Breaking News

ಮಗಳ ಪ್ರೇಮ್ ಕಹಾನಿಗೆ ರೈಲಿಗೆ ತಲೆ ಕೊಟ್ಟು ತಂದೆ

Spread the love

ಅದು ರಾಯಚೂರು ನಗರದಲ್ಲಿ ವಾಸವಿದ್ದ ಬಡ ಕುಟುಂಬ..ಅಲ್ಲಿ ಮನೆ ಯಜಮಾನ 44 ವರ್ಷದ ಸಮೀರ್ ಅಹ್ಮದ್, ಪತ್ನಿ ಜುಲ್ಲಾಕಾ ಬೇಗಂ.. ಈ ದಂಪತಿಗೆ ಮೆಹಾಮುನ್ ಅನ್ನೋ ಮುದ್ದು ಮಗಳಿದ್ಲು.. ಸಮೀರ್ ಆಟೋ ಓಡಿಸುತ್ತಿದ್ರೆ, ಪತಿಗೆ ಆರ್ಥಿಕ ಸಹಾಯ ತುಂಬಲು ಪತ್ನಿ ಜುಲ್ಲಾಕಾ ಬೇಗಂ ಮೊಹಮ್ಮದ್ ಹುಸೇನ್ ಅನ್ನೋ ಶ್ರೀಮಂತರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ರು.. ಕಷ್ಟ ಪಟ್ಟು ಹಗಲಿರುಳು ದುಡಿದು ಮಗಳು ಮೆಹಾಮುನ್ ಳನ್ನ ಇಂಜಿನಿಯರಿಂಗ್ ಓದಿಸಿದ್ರು..

ಅವ್ರು ತಾನಾಯ್ತು ತಮ್ಮ ಕೆಲಸ ಆಯ್ತು ಅಂತ ಜೀವನ ನಡೆಸ್ತಿದ್ದೋರು.. ಆದ್ರೆ ಮಗಳ ಪ್ರೇಮ್ ಕಹಾನಿಗೆ ಅಲ್ಲೊಂದು ನಡೆಯಬಾರದ ಘಟನೆ ನಡೆದಿತ್ತು.. ಆ ಮರ್ಯಾದೆಗೆ ಹೆದರಿ ಆ ಕುಟುಂಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು ತಂದೆ ತಾಯಿ ಖಲ್ಲಾಸ್ ಆಗಿದ್ರೆ, ಮಗಳು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾಳೆ..

ಮಗಳ ಪ್ರೇಮ್ ಕಹಾನಿಗೆ ರೈಲಿಗೆ ತಲೆ ಕೊಟ್ಟು ತಂದೆ ತಾಯಿ ಖಲ್ಲಾಸ್, ಇಂಜಿನಿಯರಿಂಗ್ ಮಗಳು ಸಾವು ಬದುಕಿನ ಮಧ್ಯೆ ಹೋರಾಟ

ಹೌದು.. ಅದು ರಾಯಚೂರು ನಗರದಲ್ಲಿ ವಾಸವಿದ್ದ ಬಡ ಕುಟುಂಬ..ಅಲ್ಲಿ ಮನೆ ಯಜಮಾನ 44 ವರ್ಷದ ಸಮೀರ್ ಅಹ್ಮದ್, ಪತ್ನಿ ಜುಲ್ಲಾಕಾ ಬೇಗಂ.. ಈ ದಂಪತಿಗೆ ಮೆಹಾಮುನ್ ಅನ್ನೋ ಮುದ್ದು ಮಗಳಿದ್ಲು.. ಸಮೀರ್ ಆಟೋ ಓಡಿಸುತ್ತಿದ್ರೆ, ಪತಿಗೆ ಆರ್ಥಿಕ ಸಹಾಯ ತುಂಬಲು ಪತ್ನಿ ಜುಲ್ಲಾಕಾ ಬೇಗಂ ಮೊಹಮ್ಮದ್ ಹುಸೇನ್ ಅನ್ನೋ ಶ್ರೀಮಂತರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ರು.. ಕಷ್ಟ ಪಟ್ಟು ಹಗಲಿರುಳು ದುಡಿದು ಮಗಳು ಮೆಹಾಮುನ್ ಳನ್ನ ಇಂಜಿನಿಯರಿಂಗ್ ಓದಿಸಿದ್ರು..

ಮೆಹಾಮುನ್ ಕೂಡ ಹೆತ್ತವರ ಆಸೆಯಂತೆ ಚೆನ್ನಾಗಿ ಓದಿದ್ಲು.. ಇನ್ನೇನು ಆಕೆಯೂ ಒಳ್ಳೆ ಕೆಲಸಕ್ಕೆ‌‌ ಸೇರಿ ಹೆತ್ತವರ ಪೋಷಣೆ ಮಾಡೋ ಕಾಲ ಕೂಡಿಬಂದಿತ್ತು.. ಮೆಹಮುನ್ ಜಾಣೆ ಅಂತ ಮನೆ ಮಾಲೀಕರು, ತಮ್ಮ ಮಕ್ಕಳಿಗೆ ಟ್ಯೂಷನ್‌ ಹೇಳೊ‌ ಕೆಲಸ ಕೊಟ್ಟಿದ್ರು.. ಅದರಂತೆ ಮೆಹಮುನ್ ಓನರ್ ಮಕ್ಕಳಿಗೆ ಮನೆಪಾಠ‌ ಹೇಳಿ‌ ಕೊಡ್ತಿದ್ಲು.. ಈ ಮಧ್ಯೆ ಮೊನ್ನೆ ಶನಿವಾರ ಏಕಾಏಕಿ ಮೆಹಮುನ್, ತಂದೆ ಸಮೀರ್ ಅಹ್ಮದ್, ತಾಯಿ ಜುಲ್ಲಾಕಾ ಬೇಗಂ ಆತ್ಮಹತ್ಯೆಗೆ ಮುಂದಾಗಿದ್ರು.. ಅದರಂತೆ ರಾಯಚೂರು ತಾಲ್ಲೂಕಿನ ಯರಮರಸ್ ಬಳಿ ರೈಲಿಗೆ ತಲೆ ಕೊಟ್ಟು ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ..


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ