Breaking News

ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ಗಳು

Spread the love

ಬೆಂಗಳೂರು: ವ್ಯಕ್ತಿಯನ್ನು ಬಂಧಿಸಿ ಹಣಕ್ಕೆ (Money) ಬೇಡಿಕೆ ಇಟ್ಟಿದ್ದ ಕೆಆರ್ ಪುರ ಪೋಲಿಸರು (KR Pura Police) ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ.

ಕೆಆರ್‌ ಪುರ ಠಾಣಾ ಇನ್ಸ್‌ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್ ರಮ್ಯಾ ಹಣಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು.

ಶ್ರೀರಾಮ್‌ ಎನ್ನುವವರನ್ನು 420 ಕೇಸ್‌ನಲ್ಲಿ ಬಂಧಿಸಿದ್ದ ರಮ್ಯಾ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ರಾತ್ರೋ ರಾತ್ರಿ 50 ಸಾವಿರ ರೂ. ಪಡೆದು ಶ್ರೀರಾಮ್‌ನನ್ನು ಬಿಟ್ಟು ಕಳುಹಿಸಿದ್ದರು.

ಅದಾದ ಬಳಿಕ ಮತ್ತೆ 4.5 ಲಕ್ಷ ನೀಡುವಂತೆ ವಕೀಲ ವೆಂಕಟಚಾಲಪತಿ ಎಂಬುವವರಿಗೆ ಪೋಲಿಸರು ಪೀಡಿಸಿದ್ದಾರೆ. ಇದರಿಂದ ಬೇಸತ್ತ ವಕೀಲ ವೆಂಕಟಚಾಲಪತಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆಯಲ್ಲಿ ಹಣ ಪಡೆಯುವಾಗಲೇ ರಮ್ಯಾ ಹಾಗೂ ವಜ್ರಮುನಿ ಇಬ್ಬರು ಪೊಲೀಸರು ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ