Breaking News

ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ಗಳು

Spread the love

ಬೆಂಗಳೂರು: ವ್ಯಕ್ತಿಯನ್ನು ಬಂಧಿಸಿ ಹಣಕ್ಕೆ (Money) ಬೇಡಿಕೆ ಇಟ್ಟಿದ್ದ ಕೆಆರ್ ಪುರ ಪೋಲಿಸರು (KR Pura Police) ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ.

ಕೆಆರ್‌ ಪುರ ಠಾಣಾ ಇನ್ಸ್‌ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್ ರಮ್ಯಾ ಹಣಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು.

ಶ್ರೀರಾಮ್‌ ಎನ್ನುವವರನ್ನು 420 ಕೇಸ್‌ನಲ್ಲಿ ಬಂಧಿಸಿದ್ದ ರಮ್ಯಾ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ರಾತ್ರೋ ರಾತ್ರಿ 50 ಸಾವಿರ ರೂ. ಪಡೆದು ಶ್ರೀರಾಮ್‌ನನ್ನು ಬಿಟ್ಟು ಕಳುಹಿಸಿದ್ದರು.

ಅದಾದ ಬಳಿಕ ಮತ್ತೆ 4.5 ಲಕ್ಷ ನೀಡುವಂತೆ ವಕೀಲ ವೆಂಕಟಚಾಲಪತಿ ಎಂಬುವವರಿಗೆ ಪೋಲಿಸರು ಪೀಡಿಸಿದ್ದಾರೆ. ಇದರಿಂದ ಬೇಸತ್ತ ವಕೀಲ ವೆಂಕಟಚಾಲಪತಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆಯಲ್ಲಿ ಹಣ ಪಡೆಯುವಾಗಲೇ ರಮ್ಯಾ ಹಾಗೂ ವಜ್ರಮುನಿ ಇಬ್ಬರು ಪೊಲೀಸರು ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ