Breaking News

ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ

Spread the love

ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ ಎಂಬ ಮೊಬೈಲ್ ಅಂಗಡಿ ನಡೆಸುತ್ತಿದ್ದ ಮುಖೇಶ್. ಸಂಜೆ ಸಮಯ ಮೊಬೈಲ್ ಶಾಪ್‌ನಲ್ಲಿ ಹನುಮಂತನ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದ ಯುವಕ. ಈ ಸಮಯದಲ್ಲಿ ಅಂಗಡಿಗೆ ಬಂದಿದ್ದ ಮುಸ್ಲಿಂ ಸಮುದಾಯ ಯುವಕರು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕ್ತಿಯ ಅಂತಾ ಜಗಳ ತೆಗೆದಿದ್ದಾರೆ. ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಹೊರ ಎಳೆದು ಮುಖೇಶ್​ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ. ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿ ಹೋಗಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ