Breaking News
Home / ರಾಜಕೀಯ / 12 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

12 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

Spread the love

ಬೇಲೂರು: ಸಸ್ಯಶಾಸ್ತ್ರ ವಿಭಾಗದ ಪದವಿ ಪರೀಕ್ಷೆಯಲ್ಲಿ 12 ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದ ತಾಲ್ಲೂಕಿನ ಜಿ.ಆರ್.ಸಂಯಮ ಅವರನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದಿಂದ ಅಭಿನಂದಿಸಲಾಯಿತು.

ವಿದ್ಯಾರ್ಥಿನಿ ಜಿ.ಆರ್.ಸಂಯಮ ಅವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತಿದ್ದಾರೆ.

ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಮಹಿಳೆಯರ ಸಾಧನೆ ಸಾಕಷ್ಟಿದೆ ಎಂದರು. ಜಿ.ಆರ್.ಸಂಯಮ ಉತ್ತಮ ಸಾಧನೆ ಮಾಡಿದ್ದು, ಇವರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

 

ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ಪ್ರಧಾನಕಾರ್ಯದರ್ಶಿ ಹೇಮಾ, ರಾಜ್ಯ ಮಹಿಳಾ ಘಟಕದ ಸದಸ್ಯ ಜಯಶೀಲ ಜಯಶಂಕರ್, ನಿರ್ದೇಶಕರಾದ ಪ್ರೇಮಲೀಲಾ, ಸೌಭಾಗ್ಯ ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ