Breaking News

ಸಿದ್ದರಾಮಯ್ಯ ಇಳಿಸುವವರು ಕಾಂಗ್ರೆಸ್‌ನಲ್ಲೇ ಇದ್ದಾರೆ: ಆರ್‌.ಅಶೋಕ

Spread the love

ಬೆಂಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವವರು ಕಾಂಗ್ರೆಸ್‌ ಪಕ್ಷದಲ್ಲೇ ಇದ್ದಾರೆ. ಅಲ್ಲಿ ಐವರು ಛಾಯಾ ಮುಖ್ಯಮಂತ್ರಿಗಳಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.

‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸದಿದ್ದರೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕಾಗುತ್ತದೆ’ ಎಂಬ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ಹೇಳಿಕೆ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕರ್ನಾಟಕದ ಕಾಂಗ್ರೆಸ್ ಒಡೆದ ಮನೆಯಾಗಿದೆ’ ಎಂದರು.

 

‘ಮುಖ್ಯಮಂತ್ರಿಯವರ ಕಾಲೆಳೆಯಲು ಬೇರೆಯವರು ಬೇಡ. ಅವರ ಪಕ್ಷದವರೇ ಇದ್ದಾರೆ. ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌ ಮಸಲತ್ತು ಮಾಡುತ್ತಿದ್ದಾರೆ. ಶ್ರೀನಿವಾಸ್‌ ನಿಜ ಹೇಳಿದ್ದಾರೆ. ಮುಖ್ಯಮಂತ್ರಿಯವರ ಬೆಂಬಲಿಗರು ಹೇಳಬೇಕು’ ಎಂದು ಹೇಳಿದರು.

‘ಕರ್ನಾಟಕದ ಕಾಂಗ್ರೆಸ್‌ನ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಹೇಳಿದ್ದಾರೆ. ಇಲ್ಲಿ ಸೂಪರ್‌ ಸಿ.ಎಂ, ಶ್ಯಾಡೋ ಸಿ.ಎಂಗಳು ಬಹಳ ಮಂದಿ ಇದ್ದಾರೆ’ ಎಂದರು.

‘ಏನು ಹೇಳಿದ್ದಾರೋ ಗೊತ್ತಿಲ್ಲ’

‘ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು ‘ಶ್ರೀನಿವಾಸ್‌ ಏನು ಹೇಳಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳುತ್ತೇನೆ. ಆ ಬಳಿಕ ಮಾತನಾಡುತ್ತೇನೆ’ ಎಂದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ