ಬೆಳಗಾವಿ: ‘ರಾಜ್ಯದಲ್ಲಿ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತೆಯರು ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ಗಳನ್ನು ಕೊಟ್ಟಿದ್ದೇವೆ. ಎಲ್ಲ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿ ನಿಮಗೆ ಉತ್ತರ ಕೊಡುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಏಕಮಾತ್ರ ಮಹಿಳಾ ಸಂಸದರಾದ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ತಪ್ಪಿಸಿದ್ದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಹಿಳೆಯರನ್ನು ನಿರ್ಲಕ್ಷ್ಯ ಮಾಡಿಲ್ಲ. ಅವರ ಅನಿಸಿಕೆ ಪಡೆದೇ ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ ಅವರನ್ನು ನಿಲ್ಲಿಸಿದ್ದೇವೆ’ ಎಂದರು.
‘ಜಿಲ್ಲೆಯಲ್ಲಿ ಯಾವುದೇ ಒಡಕು, ಅಡ್ಡಿ, ಆತಂಕ ಇಲ್ಲ. ಬೆಳಗಾವಿಗೆ ನರೇಂದ್ರ ಮೋದಿ ಅವರನ್ನು ಕರೆಯಿಸಿ ಪ್ರಚಾರ ಮಾಡಬೇಕು ಎಂದು ಎಲ್ಲ ಕಾರ್ಯಕರ್ತರು ಕೇಳಿದ್ದಾರೆ. ಈ ಸಂಬಂಧ ಚರ್ಚೆ ಮಾಡುತ್ತೇನೆ. ಯಾವುದೇ ಅಸಮಾಧಾನ ಶಮನ ಮಾಡುವುದು ಈಗ ಅಗತ್ಯವಿಲ್ಲ’ ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Laxmi News 24×7