Breaking News
Home / ರಾಜಕೀಯ / ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Spread the love

ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಹುಣಸಗಿ: ಕುಡಿಯುವ ನೀರಿನ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸಗಿ ಪಟ್ಟಣದಲ್ಲಿ ಮಾ. 27ರ ಬುಧವಾರ ರಾತ್ರಿ ನಡೆದಿದೆ.

ನಂದಕುಮಾರ ಕಟ್ಟಿಮನಿ (21)ಕೊಲೆಯಾದ ಯುವಕ.

ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬ ಯುವಕನನ್ನು ಹಣುಮಂತ ಎಂಬಾತ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ.

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ತೀವ್ರ ಗಾಯಗೊಂಡವನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಕುಡಿಯುವ ನೀರಿನ ವಿಚಾರಕ್ಕೆ ನೆರೆಯ ಸಂಬಂಧಿಕರು ಕೊಲೆಯಾದ ಯುವಕನ ಅಜ್ಜಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದರು. ಎರಡು ಮನೆಯ ನಡುವೆಯಿದ್ದ ನಳ್ಳಿಯಿಂದ ನೀರು ತುಂಬಿಕೊಳ್ಳಲು ಹೋದಾಗ ಅಜ್ಜಿಯೊಂದಿಗೆ ಜಗಳ ಮಾಡಿಕೊಂಡಿದ್ದರು. ಅಜ್ಜಿಯೊಂದಿಗೆ ಜಗಳ ಮಾಡುತ್ತಿದ್ದನ್ನು ಕಂಡ ಮೊಮ್ಮಗ ನಂದಕುಮಾರ ಪ್ರಶ್ನಿಸಲು ಮುಂದಾದಾಗ ಈ ವೇಳೆ ಹನುಮಂತ ಚಾಕುವಿನಿಂದ ಇರಿದ್ದಾನೆ ಎಂದು ಶರಣಮ್ಮ ಯಮನಪ್ಪ ಕಟ್ಟಿಮನಿ ಅವರು ನೀಡಿದ ದೂರಿನನ್ವಯ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್‌ಪಿ ಜಿ.ಸಂಗೀತಾ ತಿಳಿಸಿದ್ದಾರೆ.

ಎಸ್‌ಪಿ ಭೇಟಿ: ಸುದ್ದಿ ತಿಳಿದ ನಂತರ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲಿಸಿ ವರದಿ ಪಡೆದುಕೊಂಡರು.

ಈ ವೇಳೆ ಡಿವೈಎಸ್‌ಪಿ ಜಾವಿದ್ ಇನಾಮದಾರ, ಸಿಪಿಐ ಸಚಿನ್ ಚಲವಾದಿ ಹಾಗೂ ಪಿಎಸ್‌ಐ ಸಂಗೀತಾ ಶಿಂಧೆ ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ