Breaking News

ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ

Spread the love

ದೇವನಹಳ್ಳಿ, ಮಾರ್ಚ್​ 28: ಸಿಲಿಕಾನ್ ಸಿಟಿ ಅಂದರೆ ಇತ್ತೀಚೆಗೆ ಟ್ರಾಪಿಕ್​​ನಿಂದಾಗಿ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಪೀಕ್ ಅವರ್​​ನಲ್ಲಿ ಪೀಣ್ಯ ಕಡೆಯಿಂದ ಹಾಸನ- ತುಮಕೂರು ಹೆದ್ದಾರಿ(highway)ತಲುಪಲು ಸವಾರರು ಹೈರಣಾಗುತ್ತಿದ್ದರು. ಆದರೆ ಈಗ ಸಿಟಿ ಹೊರ ವಲಯದಲ್ಲಿ ಜನರಿಗೆ ಸಂಚಾರಕ್ಕೆ ಹೈಟೆಕ್ ಹೈವೆ ಮುಕ್ತವಾಗಿದೆ. ಆ ಮೂಲಕ ಹೆದ್ದಾರಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡುವ ಜೊತೆಗೆ ಸುರಕ್ಷತೆಗೂ ಒತ್ತು ನೀಡಲಾಗಿದೆ. ಹೊಸಕೋಟೆಯಿಂದ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ದಾಬಸ್ ಪೇಟೆವರೆಗೂ ಹೆದ್ದಾರಿ ನಿರ್ಮಾಣವಾಗಿದೆ.

ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ: ಚೆನೈ, ಆಂಧ್ರ, ಮಂಗಳೂರು ಪ್ರಯಾಣ ಇನ್ನಷ್ಟು ಫಾಸ್ಟ್!

ಅಂದಹಾಗೆ ಇಷ್ಟು ದಿನ ಆಂಧ್ರದ ಚಿತ್ತೂರು ತಮಿಳುನಾಡಿನ ಚೆನೈನಿಂದ ಮಂಗಳೂರಿಗೆ ಹೋಗಲು ಬರ್ತಿದ್ದ ವಾಹನ ಸವಾರರು ಸಿಟಿ ಒಳಗಡೆ ಪ್ರವೇಶವಾಗಿ ಪೀಣ್ಯ ಫ್ಲೈ ಓವರ್​ ಮೂಲಕ ನೆಲಮಂಗಲ ತಲುಪಿ ಹೆದ್ದಾರಿಯಲ್ಲಿ ಗಂಟೆ ಗಟ್ಟಲೆ ಕಾದು ತೆರಳುತ್ತಿದ್ದರು. ಆದರೆ ಇದೀಗ ಸಿಟಿ ಹೊರವಲಯದಲ್ಲಿ ನೂತನ ಹೆದ್ದಾರಿ ನಿರ್ಮಾಣವಾಗಿದ್ದು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರವರೆಗೂ ಸಂಪೂರ್ಣ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ.

ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ: ಚೆನೈ, ಆಂಧ್ರ, ಮಂಗಳೂರು ಪ್ರಯಾಣ ಇನ್ನಷ್ಟು ಫಾಸ್ಟ್!

ಕೋಲಾರ ಬೆಂಗಳೂರು ಹೆದ್ದಾರಿಯಿಂದ ಆರಂಭವಾಗುವ ನೂತನ ಹೆದ್ದಾರಿ ದೇವನಹಳ್ಳಿ ದೊಡ್ಡಬಳ್ಳಾಪುರ ಮೂಲಕ ಪಟ್ಟಣಗಳನ್ನ ಪ್ರವೇಶಿಸದೆ ಹೊರವಲಯದ ಫ್ಲೈ ಓವರ್​ಗಳ ಮೂಲಕ ಸಾಗಿದ್ದು ಎಲ್ಲೆಡೆ ಕಿಲೋ ಮೀಟರ್​ಗೆ ಒಂದರಂತೆ ಹೈಟೆಕ್ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಜೊತೆಗೆ ಒಂದು ಬದಿಯಲ್ಲಿ ಎರಡು ಹಾಗೂ ಮೂರು ಪಥಗಳ ಹೆದ್ದಾರಿಯನ್ನ ಮಾಡಲಾಗಿದ್ದು ಇಷ್ಟು ದಿನ ಹೊಸಕೋಟೆಯಿಂದ ದಾಬಸ್ ಪೇಟೆಗೆ ಮೂರು ಗಂಟೆಗೂ ಹೆಚು ಕಾಲ ಸಂಚರಿಸುತ್ತಿದ್ದ ವಾಹನ ಸವಾರರು ಇದೀಗ ಒಂದು ಗಂಟೆಯಲ್ಲೆ ಹೊಸಕೋಟೆಯಿಂದ ದಾಬಸ್ ಪೇಟೆಯನ್ನ ತಲುಪುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ