Breaking News

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ.

Spread the love

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ.

ಚಿಕ್ಕೋಡಿ | ಬರದ ಬರೆ: ಬಾಡಿದ ತೋಟಗಾರಿಕೆ ಬೆಳೆ

ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ.

ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಬೆಳೆದವರಿಗೆ ಅಷ್ಟೇನೂ ತೊಂದರೆ ಇಲ್ಲ.

ಪ್ರತಿ ವರ್ಷಕ್ಕೆ ಹೋಲಿಸಿದರೆ ತೋಟಗಾರಿಕೆ ಬೆಳೆಯ ಪ್ರಮಾಣದಲ್ಲಿ ಈ ವರ್ಷ ಶೇ 10ರಿಂದ ಶೇ15 ರಷ್ಟು ಕಡಿಮೆಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ. ಹೀಗಾಗಿ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ತರಕಾರಿ ಹಾಗೂ ಹಣ್ಣುಗಳ ಲಭ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ