Breaking News

ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ

Spread the love

ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ ಮಾಡಿದೆ.

ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Spread the love ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ