Breaking News

ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Spread the love

ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್‌ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ.
ಸಂವಿಧಾನ ತಿದ್ದುಪಡಿ  ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್‌ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ.

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ ದೂರವುಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಕಾಗೇರಿ ಬೆಂಬಲಿಗರು ಅನಂತ್‌ ಭೇಟಿಗೆ ಯತ್ನಿಸಿದಾಗ “ನಾಳೆ- ನಾಡಿದ್ದು ನೋಡೋಣ’ ಎಂದು ಹೇಳಿ ಕಳುಹಿಸಿ ದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಅವರನ್ನು ಭೇಟಿ ಮಾಡಲು ತೆರಳಿ ಮನೆಬಾಗಿಲ ಬಳಿ ಕಾದು ಕಾಗೇರಿ ವಾಪಸ್‌ ಆಗಿದ್ದಾರೆ ಎಂಬ ವಿಷಯವೂ ಕೇಳಿಬಂದಿದೆ. ಆದರೆ ಸಂಸದರ ಮನೆಯ ಬಳಿ ಜನರಿದ್ದ ಕಾರಣ ಕಾಗೇರಿ ಒಳಗೆ ಹೋಗಿಲ್ಲ ಎನ್ನಲಾಗಿದೆ. ಈ ಎಲ್ಲ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಂಸದ ಹೆಗಡೆ ಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಶಾಸಕ ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

Spread the loveಬೆಂಗಳೂರು: ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಕಾನೂನುಬಾಹಿರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ