Breaking News
Home / ರಾಷ್ಟ್ರೀಯ / ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

Spread the love

ಮುಂಬಯಿ: ಮುಂಬೈ ಇಂಡಿಯನ್ಸ್‌ ಸತತ ಸೋಲಿನ ಸುಳಿಗೆ ಸಿಲುಕಿರುವಂತೆಯೇ ತಂಡಕ್ಕೆ ಇನ್ನೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಆಗಮನ ಇನ್ನೂ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.

ವಿಶ್ವದ ನಂ.1 ಟಿ20 ಬ್ಯಾಟರ್‌ ಆಗಿರುವ ಸೂರ್ಯಕುಮಾರ್‌ ಯಾದವ್‌ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ.

ಹೀಗಾಗಿ ಇವರು ಮುಂಬೈ ತಂಡ ಸೇರಿಕೊಳ್ಳುವುದು ಇನ್ನಷ್ಟು ದಿನ ವಿಳಂಬವಾಗಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

Mumbai Indians: ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ಸಂಪೂರ್ಣ ಫಿಟ್‌ನೆಸ್‌ಗೆ ಮರಳಿದ ಬಳಿಕವಷ್ಟೇ ಸೂರ್ಯಕುಮಾರ್‌ ಅವರಿಗೆ ಎನ್‌ಸಿಎಯಿಂದ ಸರ್ಟಿಫಿಕೆಟ್‌ ಲಭಿಸಲಿದೆ. ಅಲ್ಲದೇ ಇವರ ವಿಷಯದಲ್ಲಿ ಬಿಸಿಸಿಐ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲು ಸಿದ್ಧವಿಲ್ಲ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಸೂರ್ಯಕುಮಾರ್‌ ಯಾದವ್‌ ಟೀಮ್‌ ಇಂಡಿಯಾ ಪಾಲಿಗೆ ಅನಿವಾರ್ಯರಾಗಿರುವುದೇ ಇದಕ್ಕೆ ಕಾರಣ. ಅವರು ಐಪಿಎಲ್‌ ಆಡದಿದ್ದರೂ ಪರ್ವಾಗಿಲ್ಲ, ಆದರೆ ವಿಶ್ವಕಪ್‌ನಿಂದ ಬೇರ್ಪಡುವಂತಿಲ್ಲ ಎಂಬುದು ಬಿಸಿಸಿಐ ನಿಲುವಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

Spread the loveಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ