Breaking News

ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ

Spread the love

ಬೆಂಗಳೂರು,-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ ಷಡ್ಯಂತ್ರ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ. ಎಂದು ಆರೋಪಿಸಿದರು.

ಪಂಚಮಸಾಲಿ ಸಮುದಾಯದ ಹೆಣ್ಣುಮಗಳು ಪ್ರಬಲವಾಗಿ ಬೆಳೆಯುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗಿಲ್ಲ. ಕಾಂಗ್ರೆಸ್ನ ಘೋಷಿತ ಅಭ್ಯರ್ಥಿ ಸಂಯುಕ್ತ ಪಾಟೀಲ್ ನೆರೆಯ ಬಿಜಾಪುರ ಜಿಲ್ಲೆಯವರು. ಆಕೆಯ ಗಂಡನ ಮನೆ ಬೀದರ್. ಅಲ್ಲಿಂದ ಬೇಕಾದರೆ ಸ್ಪರ್ಧಿಸಬಹುದಿತ್ತು. ಬಾಗಲಕೋಟೆಗೆ ಬಂದು ಸ್ಪರ್ಧೆ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.

ನಿನ್ನೆ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವೀಣಾ ಕಾಶಪ್ಪನವರ್ ಅವರಿಗೆ ವಿಧಾನಪರಿಷತ್ ಸದಸ್ಯತ್ವ ಅಥವಾ ವಿಧಾನಸಭೆಯ ಯಾವುದಾದರೂ ಕ್ಷೇತ್ರವನ್ನು ನಿಗದಿ ಮಾಡುವಂತೆ ಜಿಲ್ಲೆಯ ಹಿರಿಯ ನಾಯಕರೊಬ್ಬರು ಕೈಮುಗಿದು ಕೇಳಿಕೊಂಡರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ