Breaking News

ಕಾಂಗ್ರೆಸ್’ ಗೆ ಕೇಂದ್ರದಿಂದ ಬಿಗ್ ರಿಲೀಫ್ ; ಚುನಾವಣೆ ಮುಗಿಯುವವರೆಗೂ ‘ತೆರಿಗೆ’ ವಸೂಲಿ ಇಲ್ಲ

Spread the love

ವದೆಹಲಿ : ಕಾಂಗ್ರೆಸ್ ಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ ಎಂದು ಹೇಳಿದೆ.

ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ.

BIG NEWS : 'ಕಾಂಗ್ರೆಸ್' ಗೆ ಕೇಂದ್ರದಿಂದ ಬಿಗ್ ರಿಲೀಫ್ ; ಚುನಾವಣೆ ಮುಗಿಯುವವರೆಗೂ 'ತೆರಿಗೆ' ವಸೂಲಿ ಇಲ್ಲ

ಜುಲೈ 24 ರವರೆಗೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಚುನಾವಣೆ ಮುಗಿಯುವವರಗೂ ಯಾವುದೇ ಕ್ರಮ ಬೇಡ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ