ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿರುವ ನಿರುಪಯುಕ್ತ ತೆರೆದ ಕೊಳವೆ ಬಾವಿ ಮುಚ್ಚುವವರಿಗೆ 500 ರೂ. ಬಹುಮಾನ ನೀಡುವುದಾಗಿ ನಗರದ ರೈತ ಗ್ಯಾರೇಜ್ ಶಿವಣ್ಣ ಎಂಬವರು ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.
ಕೊರೆಯಿಸಿದ ವಿಫಲ ಕೊಳವೆ ಬಾವಿಯನ್ನು ಮುಚ್ಚದಿದ್ದರೆ ಆಗುವ ಅನಾಹುತ ಗೊತ್ತಿದ್ದರೂ ಜನ ಅವುಗಳನ್ನು ಮುಚ್ಚಲು ಮುಂದಾಗುತ್ತಿಲ್ಲ.
ಈ ಕುರಿತು ಬೀದಿ ನಾಟಕಗಳನ್ನು ಮಾಡಿದ್ದೇನೆ. ಆದರೂ ಜನ ಎಚ್ಚೆತ್ತುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.