Breaking News

ಸಾಮಾನ್ಯ ಕಾರ್ಯಕರ್ತರನ್ನೂ ಬೆಳೆಸಿದ ಕಾಂಗ್ರೆಸ್‌’

Spread the love

ರಬಾವಿ: ’25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆ ಪ್ರತಿನಧಿಸಲು ಏಕೈಕ ಮಹಿಳಾ ಮಂತ್ರಿಯಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದು.

ಇದನ್ನು ಗಮನಿಸಿ ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

'ಸಾಮಾನ್ಯ ಕಾರ್ಯಕರ್ತರನ್ನೂ ಬೆಳೆಸಿದ ಕಾಂಗ್ರೆಸ್‌'

ಅರಬಾವಿ‌ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.

‘ತಾಯಿ ಲಕ್ಷ್ಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಬೇಕು’ ಎಂದು ಅಭ್ಯರ್ಥಿ ಮೃಣಾಲ್‌ ಮನವಿ ಮಾಡಿದರು.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ