Breaking News

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

Spread the love

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

ಜೈಪುರ: ‘ದೇಶದ ರೈತರು ತಮ್ಮ ಬೆಳಗೆ ಕನಿಷ್ಠ ಬೆಂಬಲ ಬೆಲೆ ಕೇಳುತ್ತಿದ್ದಾರೆ, ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಮಹಿಳೆಯರು ಹಣದುಬ್ಬರದಿಂದ ಬೇಸತ್ತಿದ್ದಾರೆ. ಆದರೆ ಇವರ ಕೂಗನ್ನು ಯಾರು ಕೇಳಿಸಿಕೊಳ್ಳುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.

 

ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದ ಅನುಪ್‌ಗಢದಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ‘ನಿರುದ್ಯೋಗ, ಹಣದುಬ್ಬರ ಈ ದೇಶದ ಅತಿದೊಡ್ಡ ಸಮಸ್ಯೆಗಳೆಂದು ದೇಶದ ಯಾರನ್ನೇ ಕೇಳಿದರೂ ಹೇಳುತ್ತಾರೆ’ ಎಂದರು.

‘ದೇಶದ ನೈಜ ಸಮಸ್ಯೆಗಳನ್ನು ಬಿಟ್ಟು ಮಾಧ್ಯಮಗಳು ಅಂಬಾನಿ ಮಗನ ಮದುವೆ ಕಾರ್ಯಕ್ರಮ ಪ್ರಸಾರ ಮಾಡುವುದರಲ್ಲಿಯೇ ನಿರತವಾಗಿವೆ. ನಿರುದ್ಯೋಗ, ಹಣದುಬ್ಬರ ಮಾಧ್ಯಮಗಳಿಗೆ ಸಮಸ್ಯೆಯಾಗಿಯೇ ಕಾಣಿಸುತ್ತಿಲ್ಲ. ದಿನದ ಇಪ್ಪತ್ತನಾಲ್ಕು ಗಂಟೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ ತೋರಿಸುವುದೇ ಅವುಗಳ ಕೆಲಸವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ