Breaking News

ಬಾಲಕನ ರಕ್ಷಿಸಲು ಹೋದ ವ್ಯಕ್ತಿ ಸಾವು

Spread the love

ರಾಮದುರ್ಗ: ತಾಲ್ಲೂಕಿನ ಅವರಾದಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನ ರಕ್ಷಿಸಲು ಮುಂದಾದ ವ್ಯಕ್ತಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಶ್ರೀಶೈಲ ಈರಪ್ಪ ಮುದಕನ್ನವರ (45) ಮೃತರು. ‘ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ ಮುಳುಗುತ್ತಿದ್ದಾಗ ರಕ್ಷಣೆಗೆ ಶ್ರೀಶೈಲ ಧಾವಿಸಿದ್ದರು.

ಬಾಲಕನನ್ನು ರಕ್ಷಿಸಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಶ್ರೀಶೈಲ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಬಾನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ