Breaking News
Home / Uncategorized / ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. ನೀವು ಆತ್ಮಹತ್ಯೆ ಮಾಡಿಕೊಂಡು ತೋರಿಸಿ ಎಂದು ನಾನು ಆಗಲೂ ಹೇಳಿದ್ದೆ. ಈಗಲೂ ಹೇಳುತ್ತೇನೆ; ನಮ್ಮ ಬಳಿ ಹಣವಿಲ್ಲದಿದ್ದರೂ ಜನರಿಂದ ಪಟ್ಟಿ ಸಂಗ್ರಹಿಸಿ ನಿಮ್ಮ ಕುಟುಂಬಕ್ಕೆ ಕೊಡುತ್ತೇವೆ’ ಎಂದರು.

‘ತಾನು ಪಂಚಮಸಾಲಿ ಎಂದು ಪುತ್ರಿ ಪ‍ರವಾಗಿ‍ ಮತ ಕೇಳುತ್ತಿರುವ ಶಿವಾನಂದ ಪಾಟೀಲ ಅವರು, ಪಂಚಮಸಾಲಿ ಹೋರಾಟ ನಡೆದಾಗ ಎಲ್ಲಿ ಹೋಗಿದ್ದರು’ ಎಂದೂ ಪ್ರಶ್ನಿಸಿದರು.


Spread the love

About Laxminews 24x7

Check Also

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ!

Spread the loveವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದಿಗೆ SIT ಮನವಿ! ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ