Breaking News

ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ

ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. ನೀವು ಆತ್ಮಹತ್ಯೆ ಮಾಡಿಕೊಂಡು ತೋರಿಸಿ ಎಂದು ನಾನು ಆಗಲೂ ಹೇಳಿದ್ದೆ. ಈಗಲೂ ಹೇಳುತ್ತೇನೆ; ನಮ್ಮ ಬಳಿ ಹಣವಿಲ್ಲದಿದ್ದರೂ ಜನರಿಂದ ಪಟ್ಟಿ ಸಂಗ್ರಹಿಸಿ ನಿಮ್ಮ ಕುಟುಂಬಕ್ಕೆ ಕೊಡುತ್ತೇವೆ’ ಎಂದರು.

‘ತಾನು ಪಂಚಮಸಾಲಿ ಎಂದು ಪುತ್ರಿ ಪ‍ರವಾಗಿ‍ ಮತ ಕೇಳುತ್ತಿರುವ ಶಿವಾನಂದ ಪಾಟೀಲ ಅವರು, ಪಂಚಮಸಾಲಿ ಹೋರಾಟ ನಡೆದಾಗ ಎಲ್ಲಿ ಹೋಗಿದ್ದರು’ ಎಂದೂ ಪ್ರಶ್ನಿಸಿದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ