Breaking News

ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ

Spread the love

ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿರುವ ಟ್ಯಾಂಕರ್ ಲಾಬಿ ಎಂದರು.

ನೀರಿನ ಕಳ್ಳ ಸಾಗಾಣಿಕೆ?

ಬೆಂಗಳೂರಿನಲ್ಲಿ ಜನಸಾಮಾನ್ಯರಿಗೆ ನೀರು ಪೂರೈಸಲು ಸರ್ಕಾರಕ್ಕೆ ನೀರಿಲ್ಲ. ಆದರೆ ಟ್ಯಾಂಕರ್ ಮಾಲೀಕರಿಗೆ ನೀರು ಎಲ್ಲಿಂದ ಸಿಗುತ್ತಿದೆ. ಇದು ರಾಜ್ಯ ಕಾಂಗ್ರೆಸ್‌ ಸರ್ಕಾರವೇ ಸೃಷ್ಟಿಸಿರುವ ನೀರಿನ ಕೃತಕ ಅಭಾವ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದು ಟ್ಯಾಂಕರ್ ನೀರು ಐದು ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಈ ಟ್ಯಾಂಕರ್ ಲಾಬಿ ಹಿಂದೆ ಸರ್ಕಾರ ನೇರವಾಗಿ ಭಾಗಿಯಾಗಿದೆ. ಅಲ್ಲಿನ ಜಲ ಮಂಡಳಿ ಅಧಿಕಾರಿಗಳ ಮೂಲಕ ನೀರಿನ ಕಳ್ಳ ಸಾಗಾಣಿಕೆ ನಡೆಸುತ್ತಿದ್ದಾರೆ ಎಂದು ಆಪಾದಿಸಿದರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ