Breaking News

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

Spread the love

ನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ರಾಂಪುರ ಗ್ರಾಮದ ಕೆರೆ ಪರಿಸರದಲ್ಲಿ ಗುರುವಾರ ವೃದ್ದರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ.

ಹುಡೇಜಾಲಿ ಗ್ರಾಮದ ಚೆನ್ನಪ್ಪ ಮಡಿವಾಳ (74) ಮೃತಪಟ್ಟವರು. ಕರಡಿ ವೃದ್ದನ ಕುತ್ತಿಗೆಗೆ ಬಾಯಿ ಹಾಕಿದ್ದರಿಂದ ದೇಹವೆಲ್ಲ ರಕ್ತಸಿಕ್ತವಾಗಿತ್ತುತೀವ್ರ ಗಾಯಗೊಂಡಿದ್ದ ಚೆನ್ನಪ್ಪ ಅವರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಡಿಸೆಂಬರ್‌ನಲ್ಲಿ ಗ್ರಾಮದ ಆಂಜನೇಯ ದೇವಸ್ಥಾ‌ನಕ್ಕೆ ರಾತ್ರಿ ವೇಳೆಯಲ್ಲಿ ಬಂದು ಭಕ್ತರು ಮೂರ್ತಿಗೆ ಹಾಕಿದ್ದ ಎಣ್ಣೆ ನೆಕ್ಕಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ