Breaking News

ಪೇಮೆಂಟ್‌ ತಗೊಂಡು ಚುನಾವಣೆಗೆ ನಿಂತಿರುವ ದಿಂಗಾಲೇಶ್ವರ – ಯತ್ನಾಳ್‌ ಗಂಭೀರ ಆರೋಪ!

Spread the love

ಹುಬ್ಬಳ್ಳಿ: ಈ ಬಾರಿಯ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ (Dingaleshwara) ಪೇಮೆಂಟ್ ಬಂದಿದೆ. ಈ ಪೇಮೆಂಟ್ ಯಾರು ಮಾಡಿದ್ದಾರೆಂಬುದು ನನಗೆ ಗೊತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಗಂಭೀರವಾಗಿ ಆರೋಪ ಮಾಡಿದ್ದಾರೆ.

Lokasabha Election 2024 : ಪೇಮೆಂಟ್‌ ತಗೊಂಡು ಚುನಾವಣೆಗೆ ನಿಂತಿರುವ ದಿಂಗಾಲೇಶ್ವರ - ಯತ್ನಾಳ್‌ ಗಂಭೀರ ಆರೋಪ!

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಪೇಮೆಂಟ್ ಮಾಡಿದ್ದಾರೆಂದು ಮೇ ೭ರಂದು ಬಹಿರಂಗಪಡಿಸುತ್ತೇನೆ ಎಂದರು.ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಈ ಚುನಾವಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ 5 ಸಾವಿರ ಮತಗಳನ್ನು ಪಡೆಯುತ್ತಾರೆಂದು ಭವಿಷ್ಯ ನುಡಿದರು.

ಈ ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅವರು ಎಷ್ಟು ಮತಗಳನ್ನು ಪಡೆದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದ ಅವರು, ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿಯನ್ನು ತೆಗಳುತ್ತಿದ್ದರು. ಆದರೆ ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿದ್ದಾರೆಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ