Breaking News
Home / ರಾಜಕೀಯ / ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

Spread the love

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಸರ್ಕಾರಿ ನೌಕರನಾಗಿ ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿರುವುದು, ಅನುಮತಿ ಪಡೆದುಕೊಳ್ಳದೆ ಕೇಂದ್ರ ಸ್ಥಾನ ಬಿಟ್ಟ ಕರ್ತವ್ಯಲೋಪದ ಮೇಲೆ ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಅಮಾನತು ಮಾಡಿದ್ದಾರೆ


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ