Breaking News

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ:ಮೋದಿ

Spread the love

ಜೈಪುರ (ಏ.22): ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ ಹಾಗೂ ಅದರ ನಾಯಕ ರಾಹುಲ್‌ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ?

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ: ಪ್ರಧಾನಿ ಮೋದಿ

ಆದರೂ ಇದನ್ನು ಕಾಂಗ್ರೆಸ್‌ ಮಾಡಲಿದೆ.

ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕುದಾರರು ಮುಸ್ಲಿಮರು’ ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್‌ ಅವರ ನೀತಿಯಂತೆ ಮುಸಲ್ಮಾನರು, ಒಳನುಸುಳುಕೋರರು ಹಾಗೂ ‘ಹೆಚ್ಚು ಮಕ್ಕಳಿದ್ದವರಿಗೆ’ ಹಂಚಲಾಗುತ್ತದೆ’ ಎಂದು ಕಿಡಿಕಾರಿದ್ದಾರೆ. ರಾಜಸ್ಥಾನದ ಬನ್ಸ್‌ವಾರಾದಲ್ಲಿ ಭಾನುವಾರ ಸಂಜೆ ಬಿಜೆಪಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಅಧಿಕಾರಕ್ಕೆ ಬಂದರೆ ಎಲ್ಲರ ಆಸ್ತಿ ಸಮೀಕ್ಷೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳುತ್ತದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ