Breaking News

ಹೃದಯಾಘಾತ: ನರೇಗಾ ಕಾರ್ಮಿಕ ಸಾವು

Spread the love

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು.

ಎಂದಿನಂತೆ ಸೋಮವಾರ ಕೂಡ ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಜತೆಯಲ್ಲಿದ್ದ ಕಾರ್ಮಿಕರು ಅವರ ಎದೆ ತಿಕ್ಕಿ, ಗಾಳಿಬೀಸಿ, ನೀರು ಕುಡಿಸಿ ಉಪಚರಿಸಲು ಯತ್ನಿಸಿದರು. ಅಷ್ಟರೊಳಗೆ ಅವರು ಉಸಿರು ನಿಲ್ಲಿಸಿದ್ದರು.

ವೈದ್ಯರು ಸ್ಥಳಕ್ಕೆ ಬಂದು ಪರಿಶೀಲಿಸಿದ ಬಳಿಕ ಬೈಲಹೊಂಗಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಲ್ಲೇಶ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿಜಯ ಪಾಟೀಲ ಹೇಳಿದರು.

ಅವರಿಗೆ ಪತ್ನಿ, ಪುತ್ರ, ಮೂವರು ಪುತ್ರಿಯರು ಇದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ