Breaking News

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love

ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು ಪಾಲಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಶರಣರಿಗೆ ಸೂಚಿಸಿದೆ.

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಕಳೆದ ವರ್ಷ ನ. 8ರಂದು ಕರ್ನಾಟಕ ಹೈಕೋರ್ಟ್‌ ಶರಣರಿಗೆ ಜಾಮೀನು ನೀಡಿತ್ತು. ಈಗ ಈ ಆದೇಶವನ್ನು 4 ತಿಂಗಳ ಕಾಲ ಅಮಾನತಿನಲ್ಲಿಟ್ಟಿರುವ ಸುಪ್ರೀಂ ಕೋರ್ಟ್‌, 4 ತಿಂಗಳೊಳಗೆ ಪ್ರಮುಖ ಸಾಕ್ಷ್ಯಗಳ ವಿಚಾರಣೆ ನಡೆಸಬೇಕು ಎಂದು ವಿಚಾರಣ ನ್ಯಾಯಾಲಯಕ್ಕೆ ಸೂಚಿಸಿದೆ. ಒಂದು ವೇಳೆ 4 ತಿಂಗಳಿನಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದರೆ ಹೆಚ್ಚುವರಿಯಾಗಿ 2 ತಿಂಗಳು ಹೆಚ್ಚಳಕ್ಕಾಗಿ ಅರ್ಜಿ ಸಲ್ಲಿಸಬಹುದು. ಒಟ್ಟಿನಲ್ಲಿ ಪ್ರತಿ ನಿತ್ಯ ವಿಚಾ ರಣೆ ನಡೆಸಿಯಾದರೂ ಸರಿ, ಒಂದು ವರ್ಷದೊ ಳಗಾಗಿ ವಿಚಾರಣೆ ಪೂರ್ಣಗೊಳಿಸಬೇಕು ಎಂದೂ ಸೂಚಿಸಿದೆ. ಸಂತ್ರಸ್ತೆಯರ ತಂದೆಯ ಪರ ವಕೀಲೆ ಅಪರ್ಣಾ ಭಟ್‌, ಈ ಪ್ರಕರಣದಲ್ಲಿ ಸಂತ್ರಸ್ತೆಯರಿಬ್ಬರು ಅಪ್ರಾಪ್ತರಾಗಿದ್ದಾರೆ. ಹೀಗಾಗಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ.

ಜಾಮೀನು ನೀಡಿರುವುದು ಸರಿಯಲ್ಲ. ಕರ್ನಾಟಕ ಹೈಕೋರ್ಟ್‌ ಆದೇಶವನ್ನು ರದ್ದು ಮಾಡಬೇಕು ಎಂದು ಕೋರಿದರು.

ಬಾಲಕಿಯರನ್ನು ಕ್ರಮವಾಗಿ 3.5 ವರ್ಷ ಮತ್ತು 1.5 ವರ್ಷ ಲೈಂಗಿಕವಾಗಿ ಹಿಂಸಿಸಲಾಗಿದೆ. ಈ ವಿಷಯವನ್ನು ಬಾಯಿ ಬಿಡದಂತೆ ಬೆದರಿಕೆ ಹಾಕಲಾಗಿದೆ. ಇಬ್ಬರು ಬಾಲಕಿಯರು ಮ್ಯಾಜಿಸ್ಟ್ರೇಟ್‌ ಅವರ ಮುಂದೆ ನೀಡಿದ ಹೇಳಿಕೆಯಲ್ಲಿ ತಮ್ಮನ್ನು ತೀವ್ರವಾಗಿ ಥಳಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ