Breaking News

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the love

ಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ

ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಬಳಿಕ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಬೈಲಹೊಂಗಲ ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಅವರು, ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ