Breaking News

ಮೋದಿ ದೇಶ ಕಂಡ ಮಹಾನ್‌ ಸುಳ್ಳುಗಾರ: ಸಚಿವ ಸಂತೋಷ ಲಾಡ್‌

Spread the love

ಶಿವಮೊಗ್ಗ: ‘ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿ ನರೇಂದ್ರ ಮೋದಿ. ಅವರು ಹೇಳುತ್ತಿರುವ ಸುಳ್ಳುಗಳೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಆಗಲಿವೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಬೇರೆ ಬೇರೆ ಪಕ್ಷದವರು ಬಹಳಷ್ಟು ಜನರು ಪ್ರಧಾನ ಮಂತ್ರಿಗಳಾಗಿದ್ದಾರೆ.ಆದರೆ, ನರೇಂದ್ರ ಮೋದಿ ಅವರಷ್ಟು ಸುಳ್ಳನ್ನು ಯಾರೂ ಹೇಳಿಲ್ಲ ಎಂದು ಲೇವಡಿ ಮಾಡಿದರು.

‘ನರೇಂದ್ರ ಮೋದಿ ತಮ್ಮ 10 ವರ್ಷಗಳ ಆಡಳಿತದ ಸಾಧನೆಯ ಬಿಟ್ಟು ಬೇರೆ ಬೇರೆ ವಿಷಯಗಳನ್ನು ಜನರ ಮುಂದೆ ಹೇಳುತ್ತಿದ್ದಾರೆ. ಆಯಾ ರಾಜ್ಯಕ್ಕೆ ತಕ್ಕಂತೆ ಪೋಷಾಕು ಧರಿಸಿಕೊಂಡು ವೇಷಕ್ಕೆ ತಕ್ಕಂತೆ ಸುಳ್ಳು ಹೇಳುತ್ತಾ ದೇಶದ ಜನರನ್ನೇ ದಿಕ್ಕು ತಪ್ಪಿಸಿದ್ದಾರೆ’ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ