Breaking News

ಮಹಾನಟಿ’ ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!

Spread the love

ಬೆಂಗಳೂರು:- ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್ ದಾಖಲಾಗಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ವೇದಿಕೆ ನೀಡಿತ್ತು. ಇದೀಗ ಈ ಶೋ ಗೆ ದೊಡ್ಡ ಶಾಕ್ ಸಿಕ್ಕಿದೆ.

ಈ ರಿಯಾಲಿಟಿ ಶೋ ನ ನಿರೂಪಣೆಯನ್ನು ಅನುಶ್ರೀ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್‌ ಸುಧೀರ್‌, ಹಿರಿಯ ನಟಿ ಪ್ರೇಮಾ, ನಟ ರಮೇಶ್ ಅರವಿಂದ್ ಮತ್ತು ನಟಿ ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ. ಇದೀಗ ಈ ಶೋನಲ್ಲಿ ಬಳಕೆಯಾದ ಸಾಲಿನ ಬಗ್ಗೆ ಅಪಸ್ವರ ಕೇಳಿ ಬಂದಿದೆBreaking News: ಮಹಾನಟಿ' ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!

ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆ ಹುಟ್ಟುಹಾಕಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಅಲ್ಲದೇ, ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.

ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ಜಡ್ಜ್​ಗಳಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ