Breaking News

ಮಗನಿಗೆ ಈಜು ಕಲಿಸಲು ಹೋಗಿ ದುರಂತ ಅಂತ್ಯ ಕಂಡ ತಂದೆ

Spread the love

ಚಿಕ್ಕಬಳ್ಳಾಪುರ: ಮಗನಿಗೆ ಈಜು (Swimming) ಕಲಿಸಲು ಹೋದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ನಡೆದಿದೆ.

ಅಂಗಡಿ ಬಾಬು (45) ಮೃತ ತಂದೆ. ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಬಾಬು ತನ್ನ ಮಗ ತೇಜುವಿಗೆ ಗ್ರಾಮದ ಕೆ.ನಾರಾಯಣಸ್ವಾಮಿ ಎಂಬವರ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದರು.

ಮಗನಿಗೆ ತರಬೇತಿ ನೀಡಿ ದಡಕ್ಕೆ ತಲುಪಿಸಿದ ತಂದೆ ಮರಳಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದು, ಮತ್ತೆ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ತಂದೆ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಮಗ ಜೋರಾಗಿ ಕಿರುಚಿದ ಕಾರಣ ಅಕ್ಕಪಕ್ಕದ ಜಮೀನಿನವರು ಬಂದು ಬಾಬುವನ್ನು ರಕ್ಷಣೆ ಮಾಡಲು ಪ್ರಯತ್ನಿಸಿದರಾದರೂ ಪ್ರಯತ್ನ ವಿಫಲವಾಗಿದೆ. ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ