Breaking News

ರಾಜ್ಯದಲ್ಲಿ ಮತದಾನ ನಡೆಯಲಿರುವ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Spread the love

ಬೆಂಗಳೂರು, ಮೇ. 06 : ಆರು ತಿಂಗಳ ಕಾಲ ಸುದೀರ್ಘವಾದ ಒಣಹವೆಯನ್ನು ಅನುಭವಿಸಿರುವ ರಾಜ್ಯದಲ್ಲಿ ಕಳೆದ ವಾರದದಿಂದ ಮಳೆ ಬಂದಿದ್ದು, ತಾಪಮಾನ ಸುಧಾರಿಸಿದೆ. ಬೆಂಗಳೂರಿನಲ್ಲಿಯೂ ಇತ್ತೀಚೆಗೆ ಎರಡು ದಿನಗಳ ಕಾಲ ಸುರಿದ ಮಳೆಗೆ ಬಿಸಿಲು ಕೊಂಚ ಕಡಿಮೆಯಾಗಿದೆ. ಸ್ದಯ ಮುಂದಿನ ಐದು ದಿನಗಳು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ಭಾನುವಾರ ಕೂಡ ತೀವ್ರ ತಾಪಮಾನವಿತ್ತು. ಕೆಲವು ಪ್ರದೇಶಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿತ್ತು. ಪಶ್ಚಿಮ ಬಂಗಾಳ, ತಮಿಳುನಾಡು, ಒಡಿಶಾ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5 ರಿಂದ 7 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 41.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಈ ವಾರ ರಾಜ್ಯದಲ್ಲಿ ಉತ್ತಮ ಮಳೆ

ಮೇ 5 ರಿಂದ ಮೇ 7 ರವರೆಗೆ ಮಧ್ಯ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯಾಗಲಿದೆ. ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಎರಡು ವಾರಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದರ ಜೊತೆಗೆ ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ